Saturday, December 18, 2010

Kann anchina ee maatali

ಸಾಹಿತ್ಯ:
ಗಾಯಕರು: ಪಿ.ಬಿ.ಶ್ರೀನಿವಾಸ್
ಚಿತ್ರ: ದಾರಿ ತಪ್ಪಿದ ಮಗ

ಕಣ್ಣಂಚಿನ ಈ ಮಾತಲಿ ಏನೇನೋ ತುಂಬಿದೆ ||೨||
ಕವಿ ಕಾಣದ ಶೃಂಗಾರದ ರಸಕಾವ್ಯ ಇಲ್ಲಿದೆ
ಕಣ್ಣಂಚಿನ ಈ ಮಾತಲಿ ಏನೇನೋ ತುಂಬಿದೆ

ನವ ಯವ್ವನ ಹೊಂಗನಸಿನ ಮಳೆಬಿಲ್ಲು ತಂದಿದೆ
ನಸುನಾಚುತೆ ಹೊಸ ಪ್ರೇಮದ ಕುಡಿಯಿಲ್ಲಿ ಚಿಗುರಿದೆ,
ನೂರಾಸೆಯ ನೆಲೆಯಾಗಿರೆ ಮಧುಚಂದ್ರದ ಮಧುಮೈತ್ರಿಯ ನಿರೀಕ್ಷೆ ಅಲ್ಲಿದೆ
ಕಣ್ಣಂಚಿನ ಈ ಮಾತಲಿ ಏನೇನೋ ತುಂಬಿದೆ
ಕವಿ ಕಾಣದ ಶೃಂಗಾರದ ರಸಕಾವ್ಯ ಇಲ್ಲಿದೆ
ಕಣ್ಣಂಚಿನ ಈ ಮಾತಲಿ ಏನೇನೋ ತುಂಬಿದೆ

ಪ್ರತಿ ಪ್ರೇಮಿಯ ಬಾಳಲ್ಲಿಯು ಶುಭರಾತ್ರಿ ಒಂದಿದೆ
ಅನುರಾಗದ ಆ ವೇಳೆಗೆ ಮನಕಾದು ನಿಂತಿದೆ
ಸರಿಜೋಡಿಯ ಕಣ್ಣರಸಿದೆ
ಈ ಜೋಡಿಯು ಸವಿನೆನಪಲಿ ಜಗವನ್ನೇ ಮರೆತಿದೆ
ಕಣ್ಣಂಚಿನ ಈ ಮಾತಲಿ ಏನೇನೋ ತುಂಬಿದೆ
ಕವಿ ಕಾಣದ ಶೃಂಗಾರದ ರಸಕಾವ್ಯ ಇಲ್ಲಿದೆ
ಕಣ್ಣಂಚಿನ ಈ ಮಾತಲಿ ಏನೇನೋ ತುಂಬಿದೆ