Sunday, November 1, 2015

ಕರ್ನಾಟಕದ ಇತಿಹಾಸದಲಿ / Karnatakada Itihaasadali

ಸಾಹಿತ್ಯ    : ಆರ್.ಎನ್.ಜಯಗೋಪಾಲ್
ಗಾಯಕರು : ಎಸ್.ಪಿ.ಬಾಲಸುಬ್ರಮಣ್ಯಂ
ಚಲನಚಿತ್ರ : ಕೃಷ್ಣ ರುಕ್ಮಿಣಿ











ಧ್ವನಿಸುರಳಿಯ ಕೊಂಡಿ / Hear the song 

ಕರ್ನಾಟಕದ ಇತಿಹಾಸದಲಿ
ಬಂಗಾರದ ಯುಗದ ಕಥೆಯನ್ನು
ಹಾಡುವೆ ಕೇಳಿ ನಾ ಹಾಡುವೆ ಕೇಳಿ
ಹಾಡುವೆ ಕೇಳಿ ನಾ ಹಾಡುವೆ ಕೇಳಿ
ಕರ್ನಾಟಕದ ಇತಿಹಾಸದಲಿ

ಜ್ಞಾನದ ಜ್ಯೋತಿಯು ವಿದ್ಯಾರಣ್ಯರು ಅನುಗ್ರಹಗೈದ ಭೂಮಿಯಿದು
ಜ್ಞಾನದ ಜ್ಯೋತಿಯು ವಿದ್ಯಾರಣ್ಯರು ಅನುಗ್ರಹಗೈದ ಭೂಮಿಯಿದು
ಹಕ್ಕ ಬುಕ್ಕರು ಆಳಿದರಿಲ್ಲಿ
ಹರುಷದ ಮಳೆಯನ್ನು ಎಲ್ಲೂ ಚೆಲ್ಲಿ
ವಿಜಯದ ಕಹಳೆಯ ಊದಿದರು
ವಿಜಯನಗರ ಸ್ಥಾಪನೆ ಮಾಡಿದರು

ಕರ್ನಾಟಕದ ಇತಿಹಾಸದಲಿ
ಬಂಗಾರದ ಯುಗದ ಕಥೆಯನ್ನು
ಹಾಡುವೆ ಕೇಳಿ ನಾ ಹಾಡುವೆ ಕೇಳಿ
ಹಾಡುವೆ ಕೇಳಿ ನಾ ಹಾಡುವೆ ಕೇಳಿ

ಗಂಡರ ಗಂಡ ಧೀರ ಪ್ರಚಂಡ ಕೃಷ್ಣದೇವರಾಯ ಆಳಿದ ವೈಭವದೆ
ಗಂಡರ ಗಂಡ ಧೀರ ಪ್ರಚಂಡ ಕೃಷ್ಣದೇವರಾಯ ಆಳಿದ ವೈಭವದೆ
ಕಲಿಗಳ ನಾಡು ಕವಿಗಳ ಬೀಡು
ಕಲಿಗಳ ನಾಡು ಕವಿಗಳ ಬೀಡು
ಎನಿಸಿತು ಹಂಪೆಯು ಆ ದಿನದೆ
ಕನ್ನಡ ಬಾವುಟ ಹಾರಿಸಿದ
ಮಧುರೆವರೆಗು ರಾಜ್ಯವ ಹರಡಿಸಿದ
ಕರ್ನಾಟಕದ ಇತಿಹಾಸದಲಿ

ಸಂಗೀತ ನಾಟ್ಯಗಳ ಸಂಗಮವಿಲ್ಲೇ ಶಿಲ್ಪಾಕಲೆಗಳ ತಾಣವಿದೆ
ಸಂಗೀತ ನಾಟ್ಯಗಳ ಸಂಗಮವಿಲ್ಲೇ ಶಿಲ್ಪಾಕಲೆಗಳ ತಾಣವಿದೆ
ಭುವನೇಶ್ವರಿಯ ತವರೂರಿಲ್ಲೇ, ಯತಿಗಳ ದಾಸರ ನೆಲೆನಾಡಿಲ್ಲೇ
ಪಾವನ ಮಣ್ಣಿದು ಹಂಪೆಯದು, ಯುಗಯುಗ ಅಳಿಯದ ಕೀರ್ತಿಯಿದು
ಕನ್ನಡ ಭೂಮಿ, ಕನ್ನಡ ನುಡಿಯು, ಕನ್ನಡ ಪ್ರೀತಿ ಎಂದೆಂದೂ ಬಾಳಲಿ
ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಗೆಲ್ಗೆ