Monday, April 24, 2017

ನಾನಿರುವುದೆ ನಿಮಗಾಗಿ / Naaniruvude nimagaagi



ಸಾಹಿತ್ಯ : ಚಿ.ಉದಯಶಂಕರ್
ಗಾಯಕರು: ಡಾ. ರಾಜ್ ಕುಮಾರ್





ನಾನಿರುವುದೆ  ನಿಮಗಾಗಿ || ೨ ||
ನಾಡಿರುವುದು ನಮಗಾಗಿ
ಕಣ್ಣೀರೇಕೆ, ಬಿಸಿ ಉಸಿರೇಕೆ  || ೨ ||
ಬಾಳುವಿರೆಲ್ಲ ಹಾಯಾಗಿ  || ೨ ||
ನಾನಿರುವುದೆ ನಿಮಗಾಗಿ

ಒಂದೇ ನಾಡಿನ ಮಕ್ಕಳು ನಾವು ಸೋದರರಂತೆ ನಾವೆಲ್ಲ || ೨ ||
ನಿಮ್ಮೊಡನಿಂದು ನಾನು ನೊಂದು
ನಿಮ್ಮೊಡನಿಂದು ನಾನು-ನೊಂದು
ಮಿಡಿದ ಕಂಬನಿ ಆರಿಲ್ಲ..
ಭರವಸೆ ನೀಡುವೆ ಇಂದು, ನಾ ನಿಮ್ಮೊಡನಿರುವೆನು ಎಂದು ..  || ೨ ||
ತಾಯಿಯ ಆಣೆ ನಿಮ್ಮನು ಕಾಡುವ ವೈರಿಯ ಉಳಿಸೊಲ್ಲ

ನಾನಿರುವುದೆ ನಿಮಗಾಗಿ || ೨ ||
ನಾಡಿರುವುದು ನಮಗಾಗಿ
ಕಣ್ಣೀರೇಕೆ, ಬಿಸಿ ಉಸಿರೇಕೆ , ಬಾಳುವಿರೆಲ್ಲ ಹಾಯಾಗಿ  || ೨ ||
ನಾನಿರುವುದೆ ನಿಮಗಾಗಿ

ಸಾವಿರ ಜನುಮದ ಪುಣ್ಯವೊ ಏನೊ ನಾನೀ ನಾಡಲಿ ಜನಿಸಿರುವೆ  || ೨ ||
ತಪಿಸಿನ ಫಲವೋ, ಹಿರಿಯರ ವರವೋ
ತಪಿಸಿನ ಫಲವೋ-ಹಿರಿಯರ ವರವೋ
ನಿಮ್ಮೀ ಪ್ರೀತಿಯ ಗಳಿಸಿರುವೆ
ವೈರಿಯ ಬಡಿದೋಡಿಸುವ, ಈ ನಾಡಿಗೆ ಬಿಡುಗಡೆ ತರುವ  || ೨ ||
ಜನತೆಗೆ ನೆಮ್ಮದಿ ಸೌಖ್ಯವ ತರುಲು ಪ್ರಾಣವನೇ ಕೊಡುವೆ

ನಾನಿರುವುದೆ ನಿಮಗಾಗಿ ನಾಡಿರುವುದು ನಮಗಾಗಿ
ಕಣ್ಣೀರೇಕೆ, ಬಿಸಿ ಉಸಿರೇಕೆ , || ೨ ||
ಬಾಳುವಿರೆಲ್ಲ ಹಾಯಾಗಿ  || ೨ ||
ನಾನಿರುವುದೆ ನಿಮಗಾಗಿ

Thursday, April 13, 2017

ಯಾವ ಕವಿಯು ಬರೆಯಲಾರ / Yaava kaviyu bariyalaara

ಸಾಹಿತ್ಯ : ಚಿ.ಉದಯಶಂಕರ್
ಗಾಯಕರು: ಡಾ. ರಾಜ್ ಕುಮಾರ್
















ಯಾವ ಕವಿಯು ಬರೆಯಲಾರ,
ಯಾವ ಕವಿಯು ಬರೆಯಲಾರ,
ಒಲವಿನಿಂದ ಕಣ್ಣೋಟದಿಂದ ....
ಹೃದಯದಲ್ಲಿ ನೀ ಬರೆದ,ಈ ಪ್ರೇಮ ಗೀತೆಯ,
ಯಾವ ಕವಿಯು ಬರೆಯಲಾರ,ಬರೆಯಲಾರ

ನಿನ್ನ ಕವಿತೆ,ಎಂಥ ಕವಿತೆ,ರಸಿಕರಾಡೋ ನುಡಿಗಳಂತೆ,
ನಿನ್ನ ಕವಿತೆ,ಎಂಥ ಕವಿತೆ,ರಸಿಕರಾಡೋ ನುಡಿಗಳಂತೆ,
ಮಲ್ಲೆ ಹೂವು ಅರಳಿದಂತೆ,ಚಂದ್ರಕಾಂತಿ ಚೆಲ್ಲಿದಂತೆ,
ಮಲ್ಲೆ ಹೂವು ಅರಳಿದಂತೆ,ಚಂದ್ರಕಾಂತಿ ಚೆಲ್ಲಿದಂತೆ,
ಜೀವ ಜೀವ ಅರಿತು ಬೆರೆತು ಸುಖವ ಕಾಣುವಂತೆ,

ಯಾವ ಕವಿಯು ಬರೆಯಲಾರ,
ಒಲವಿನಿಂದ ಕಣ್ಣೋಟದಿಂದ ....
ಹೃದಯದಲ್ಲಿ ನೀ ಬರೆದ,ಈ ಪ್ರೇಮ ಗೀತೆಯ,
ಯಾವ ಕವಿಯು ಬರೆಯಲಾರ

ಪ್ರೇಮ ಸುಮವು,ಅರಳುವಂತೆ,ಪ್ರಣಯ ಗಂಧ ಚೆಲ್ಲುವಂತೆ,
ಪ್ರೇಮ ಸುಮವು,ಅರಳುವಂತೆ,ಪ್ರಣಯ ಗಂಧ ಚೆಲ್ಲುವಂತೆ,
ಕಂಗಳೇರಡು ದುಂಬಿಯಾಗಿ ಭ್ರಮರ ಗೀತೆ ಹಾಡುವಂತೆ,
ಕಂಗಳೇರಡು ದುಂಬಿಯಾಗಿ ಭ್ರಮರ ಗೀತೆ ಹಾಡುವಂತೆ,
ಜೇನಿಗಾಗಿ ತುಟಿಗಳೇರಡು ಸನಿಹ ಸೇರುವಂತೆ 

ಯಾವ ಕವಿಯು ಬರೆಯಲಾರ,
ಒಲವಿನಿಂದ ಕಣ್ಣೋಟದಿಂದ....
ಹೃದಯದಲ್ಲಿ ನೀ ಬರೆದ,ಈ ಪ್ರೇಮ ಗೀತೆಯ 
ಯಾವ ಕವಿಯು ಬರೆಯಲಾರ,ಬರೆಯಲಾ...ರ




ಎಲ್ಲಾದರೂ ಇರು ಎಂತಾದರು ಇರು / Ellaadaru iru Entaadaru iru

ಸಾಹಿತ್ಯ    : ರಾಷ್ಟ್ರಕವಿ ಕುವೆಂಪು   
ಗಾಯಕರು: ಡಾ. ರಾಜ್ ಕುಮಾರ್
ಸಂಗೀತ ಸಂಯೋಜನೆ : ಸಿ.ಅಶ್ವಥ್ 














ಎಲ್ಲಾದರೂ ಇರು ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು 
ಕನ್ನಡವೇ ಸತ್ಯ ಕನ್ನಡವೇ ನಿತ್ಯ 
ಕನ್ನಡ ಗೋವಿನ ಓ ಮುದ್ದಿನ ಕರು
ಕನ್ನಡತನವೊಂದಿದ್ದರೆ ನೀ ಅಮ್ಮಗೆ ಕಲ್ಪತರು
ಕನ್ನಡವೇ ಸತ್ಯ ಕನ್ನಡವೇ ನಿತ್ಯ

ನೀ ಮೆಟ್ಟುವ ನೆಲ ಅದೇ ಕರ್ನಾಟಕ,  ನೀನೇರುವ ಮಲೆ ಸಹ್ಯಾದ್ರಿ
ನೀ ಮೆಟ್ಟುವ ನೆಲ ಅದೇ ಕರ್ನಾಟಕ,  ನೀನೇರುವ ಮಲೆ ಸಹ್ಯಾದ್ರಿ
ನೀ ಮುಟ್ಟುವ ಮರ ಶ್ರೀಗಂಧದ ಮರ, ನೀ ಕುಡಿಯುವ ನೀರ್ ಕಾವೇರಿ 
ಪಂಪನನೋದುವ ನಿನ್ನಾ ನಾಲಗೆ ಕನ್ನಡವೇ ಸತ್ಯ
ಕುಮಾರವ್ಯಾಸನ ಆಲಿಪ ಕಿವಿ ಅದು ಕನ್ನಡವೇ ನಿತ್ಯ
ಎಲ್ಲಾದರೂ ಇರು ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು

ಹರಿಹರ ರಾಘವರಿಗೆ ಎರಗುವ ಮನ, ಹಾಳಾಗಿಹ ಹಂಪೆಗೆ ಕೊರಗುವ ಮನ
ಹರಿಹರ ರಾಘವರಿಗೆ ಎರಗುವ ಮನ, ಹಾಳಾಗಿಹ ಹಂಪೆಗೆ ಕೊರಗುವ ಮನ
ಪೆ೦ಪಿನ ಬನವಾಸಿಗೆ ಕರಗುವ ಮನ, ಬೆಳ್ಗೊಳ ಬೇಲೂರ್ಗಳ ನೆನೆಯುವ ಮನ
ಜೋಗದ ಜಲಪಾತದಿ ಧುಮುಕುವ ಮನ, ಮಲೆನಾಡಿಗೆ ಹೊಂಪುಳಿ ಹೋಗುವ ಮನ
ಕನ್ನಡವೇ ಸತ್ಯ ಕನ್ನಡವೇ ನಿತ್ಯ
ಎಲ್ಲಾದರೂ ಇರು ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು

ಕಾಜಾಣಕೆ ಗಿಳಿ ಕೋಗಿಲೆ ಇಂಪಿಗೆ, ಮಲ್ಲಿಗೆ ಸಂಪಿಗೆ, ಕೇದಗೆ ಸೊಂಪಿಗೆ
ಮಾವಿನ ಹೊಂಗೆಯ ತಳಿರಿನ ತಂಪಿಗೆ,
ರಸರೊಮಾಂಚನಗೊಳುವ ತನುಮನ
ಎಲ್ಲಿದ್ದರೆ ಏನ್, ಎಂತಿದ್ದರೆ ಏನ್ 
ಎಂದೆಂದಿಗೂ ತಾನ್ ಕನ್ನಡವೇ ಸತ್ಯ, ಕನ್ನಡವೇ ನಿತ್ಯ, ಅನ್ಯವೆನಲದೆ ಮಿಥ್ಯ 
ಎಲ್ಲಾದರೂ ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು
ಕನ್ನಡವೇ ಸತ್ಯ, ಕನ್ನಡವೇ ನಿತ್ಯ
ಕನ್ನಡವೇ ಸತ್ಯ, ಕನ್ನಡವೇ ನಿತ್ಯ
ಕನ್ನಡವೇ ಸತ್ಯ, ಕನ್ನಡವೇ ನಿತ್ಯ