Thursday, February 21, 2013

ನೀ..... ಸಿಗದೇ ಬಾಳೊಂದು ಬಾಳೆ ಕೃಷ್ಣ / Nee sigade Baalondu baale

ಸಾಹಿತ್ಯ : ಡಾ. ಏನ್.ಎಸ್.ಲಕ್ಷ್ಮಿನಾರಾಯಣ ಭಟ್ಟ
ಗಾಯಕರು : ಸುನಿತಾ ಅನಂತಸ್ವಾಮಿ



ನೀ..... ಸಿಗದೇ ಬಾಳೊಂದು ಬಾಳೆ ಕೃಷ್ಣ ||||
ನಾ ತಾಳಲಾರೆ ಈ..... ವಿರಹ ಕೃಷ್ಣ ||||
ನೀ..... ಸಿಗದೇ ಬಾಳೊಂದು ಬಾಳೆ ಕೃಷ್ಣ

ಕಮಲವಿಲ್ಲದ ಕೆರೆ ನನ್ನ ಬಾಳು, ಚಂದ್ರನಿಲ್ಲದ ರಾತ್ರಿ ಬೀಳು
ನೀ ಸಿಗದೇ ಉರಿಉರಿ ಕಳೆದೆ ಇರುಳ ||||
ಮಾತಿಲ್ಲ ಬಿಗಿದಿದೆ ದುಃಖ ಕೊರಳ
ನೀ..... ಸಿಗದೇ ಬಾಳೊಂದು ಬಾಳೆ ಕೃಷ್ಣ ||||

ಅನ್ನ ಸೇರದು, ನಿದ್ದೆ ಬಂದುದೆಂದು ಕುದಿವೆ ಒಂದೇ ಸಮ ಕೃಷ್ಣ ಎಂದು ||||
ಯಾರು ಅರಿವರು ಹೇಳು ನೋವ ||||
ತಲ್ಲಣಿಸಿ ಕೂಗುತಿದೆ ದಾಸಿ ಜೀವ ||||
ನೀ..... ಸಿಗದೇ ಬಾಳೊಂದು ಬಾಳೆ ಕೃಷ್ಣ ||||

ಒಳಗಿರುವ ಗಿರಿಧರನೆ ಹೊರಗೆ ಬಾರೋ ಕಣ್ಣೆದುರು ನಿಂತು ಆ ರೂಪ ತೋರೊ ||||
ಜನುಮಜನುಮದ ರಾಗ ನನ್ನ ಪ್ರೀತಿ ||||
ನಿನ್ನೊಳಗೆ ಹರಿವುದೇ ಅದರ ರೀತಿ ||||ನೀ..... ಸಿಗದೇ ಬಾಳೊಂದು ಬಾಳೆ ಕೃಷ್ಣ ||||
ನಾ ತಾಳಲಾರೆ ಈ..... ವಿರಹ ಕೃಷ್ಣ ||||

ನೀ..... ಸಿಗದೇ ಬಾಳೊಂದು ಬಾಳೆ ಕೃಷ್ಣ ..... ಕೃಷ್ಣ ..ಕೃಷ್ಣ ..ಕೃಷ್ಣ 

ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ/Hosa Dweepagalige horataana

ಸಾಹಿತ್ಯ: ದ.ರಾ.ಬೇಂದ್ರೆ
ಗಾಯಕರು: ಸಿ.ಅಶ್ವಥ್

ಹೊಸ ದ್ವೀಪಗಳಿಗೆ  ಹೊರಟಾನ ಬನ್ನಿ, ಅಂದದೋ ಅಂದದಾ ||||

ಬಂಗಾರನೀರ ಕಡಲಾಚೆಗೀಚೆಗಿದೆ ನೀಲನೀಲ ತೀರ,
ಮಿಂಚುಬಳಗ ತೆರೆತೆರೆಗಳಾಗಿ ಅಲೆಯುವುದು ಪುಟ್ಟ ಪೂರ 
ಅದು ನಮ್ಮ ಊರು ಇದು ನಿಮ್ಮ ಊರು  ತಂತಮ್ಮ ಊರೋ ಧೀರ
ಅದರೊಳಗೆ ನಾವು ನಮ್ಮೊಳಗೆ ತಾವು ಅದು ಇಲ್ಲವಣ್ಣ ದೂರ

ಕರೆ ಬಂದಿತಣ್ಣ ತೆರೆ ಬಂದಿತಣ್ಣ  ನೆರೆ ಬಂದಿತಣ್ಣ ಬಳಿಗೆ,
ಹರಿತದ ಭಾವ ಬೆರಿತದ ಜೀವ  ಅದರೊಳಗೆ  ಒಳಗೆಒಳಗೆಒಳಗೆ  ||||
ಇದೆ ಸಮಯವಣ್ಣ  ಇದೆ ಸಮಯತಮ್ಮ ನಮ್ನಿಮ್ಮ ಆತ್ಮಗಳಿಗೆ  ||||
ಅಂಬಿಗನು ಬಂದ ನಂಬಿಗನು ಬಂದ ಬಂದತಾ ದಿವ್ಯ ಘಳಿಗೆ

ಇದು ಉಪ್ಪುನೀರ ಕಡಲಲ್ಲೋ ನಮ್ಮ ಒಡಲಲ್ಲು ಇದರ ನೆಲೆಯು,
ಕಂಡವರಿಗಲ್ಲೋ  ಕಂಡವರಿಗಷ್ಟೇ ತಿಳಿದದಾ ಇದರ ಬೆಲೆಯು ||||
ಸಿಕಲ್ಲಿ ಅಲ್ಲ ಸಿಕಲ್ಲೇ ಮಾತ್ರ ಒಡೆಯುವುದು ಇದರ ಸೆಲೆಯು
ಕಣ್ ಅರಳಿದಾಗ ಕಣ್ ಹೊರಳಿದಾಗ ಹೊಳೆಯುವುದು ಇದರ ಕಳೆಯು||||

ಬಂದವರ ಬಳಿಗೆ ಬಂದದಾ ಮತ್ತು ನಿಂದವರ ನೆರೆಗೂ ಬಂದದೋ ಬಂದದ
ನವ ಮನುವು ಬಂದ ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ ಅಂದದೋ ಅಂದದ ||||
ಅಂದದೋ ಅಂದದ ||||
ಹೊಸ ದ್ವೀಪಗಳಿಗೆ  ಹೊರಟಾನ  ಬನ್ನಿ  ಅಂದದೋ ಅಂದದ ||||

ಚೆಲುವೆಯ ಅಂದದ ಮೊಗಕೆ ಕಣ್ಣೇ ಭೂಷಣ/Cheluveya andada mogake

ಸಾಹಿತ್ಯ: ಸಾಹಿತ್ಯ ರತ್ನ ಚಿ.ಉದಯಶಂಕರ್
ಗಾಯಕರು: ಎಸ್.ಪಿ.ಬಾಲಸುಬ್ರಮಣ್ಯಂ
ಚಲನಚಿತ್ರ: ದೇವರಗುಡಿ

ಚೆಲುವೆಯ ಅಂದದ ಮೊಗಕೆ ಕಣ್ಣೇ ಭೂಷಣ, ನಲಿಯುತ ಬಾಳುವ ಮನೆಗೆ ಹೆಣ್ಣೇ ಭೂಷಣ ।।।।
ಸುಖ ಸಂಸಾರಕೆ ಎಂದೂ ಸತಿಯೇ ಕಾರಣ
ಬಾನಿಗೆ ಎಂದೆಂದಿಗೂ ರವಿಯೇ ಭೂಷಣ, ಬಳುಕುವ ಲತೆಗೆ ಹೆಣ್ಣಿನ ಮುಡಿಗೆ ಹೂವೇ ಭೂಷಣ
ರಜನಿಗೆ ಎಂದೆಂದಿಗೂ ಶಶಿಯೇ ಭೂಷಣ,  ಅರಳಿದ ಮನಕೆ ಹವಳದ ತುಟಿಗೆ ನಗುವೇ ಭೂಷಣ
ನೋವಿಗೆ ನಲಿವಿಗೆ.......ನೋವಿಗೆ ನಲಿವಿಗೆ ಹೆಣ್ಣೇ ಕಾರಣ
ಚೆಲುವೆಯ ಅಂದದ ಮೊಗಕೆ ಕಣ್ಣೇ ಭೂಷಣ, ನಲಿಯುತ ಬಾಳುವ ಮನೆಗೆ ಹೆಣ್ಣೇ ಭೂಷಣ
ಸುಖ ಸಂಸಾರಕೆ ಎಂದೂ ಸತಿಯೇ ಕಾರಣ
ಮದುವೆಯ ಅನುಬಂಧವು ಎಂದೂ ಅಳಿಯದು, ಕೋಪದ ಕಿಡಿಗೆ, ರೋಷದ ಉರಿಗೆ ಒಲವು ಬಾಡದು
ದೇಹವು ದೂರಾದರು ಮನಸು ಮರೆಯದುಬೆರೆತಿಹ ಜೀವ ವಿರಹದ ನೋವ ಎಂದೂ ಸಹಿಸದು
ಒಲವಿನ ಜೀವನ .....ಒಲವಿನ ಜೀವನ ಸುಖಕೆ ಕಾರಣ
ಚೆಲುವೆಯ ಅಂದದ ಮೊಗಕೆ ಕಣ್ಣೇ ಭೂಷಣ, ನಲಿಯುತ ಬಾಳುವ ಮನೆಗೆ ಹೆಣ್ಣೇ ಭೂಷಣ
ಸುಖ ಸಂಸಾರಕೆ ಎಂದೂ ಸತಿಯೇ ಕಾರಣ